ADVERTISEMENT

‘ಮಾತೃಪೂರ್ಣ ಯೋಜನೆಯ ಲೋಪದೋಷ ಸರಿಪಡಿಸಿ’

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2017, 5:59 IST
Last Updated 1 ಡಿಸೆಂಬರ್ 2017, 5:59 IST

ಅಂಕೋಲಾ: ಮಾತೃಪೂರ್ಣ ಯೋಜನೆಯ ಲೋಪ ದೋಷಗಳನ್ನು ಹಾಗೂ ಸ್ಥಳೀಯ ಸಮಸ್ಯೆಗಳನ್ನು ನಿವಾರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಹಶೀಲ್ದಾರ ವಿವೇಕ ಶೇಣ್ವಿ ಅವರಿಗೆ ಮನವಿ ಸಲ್ಲಿಸಲಾಯಿತು.

‘ಮಾತೃಪೂರ್ಣ ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಮತ್ತು ಅನುಷ್ಠಾನದ ಸಂದರ್ಭದಲ್ಲಿ ಹಲವಾರು ಕಡೆಗಳಿಂದ ತಾಯಂದಿರು ಕೇಂದ್ರಕ್ಕೆ ಬಂದು ಊಟ ಸೇವಿಸಲು ಸಾರಿಗೆ ಸಮಸ್ಯೆ ಮತ್ತು ಇನ್ನಿತರ ಸಮಸ್ಯೆಗಳಿವೆ.  ಇದರಿಂದಾಗಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಹೊಣೆಗಾರರನ್ನಾಗಿ ಮಾಡಬಾರದು’ ಎಂದು ಆಗ್ರಹಿಸಿದರು.

ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಮೀನಾಕ್ಷಿ ನಾಯಕ, ಕಾರ್ಯದರ್ಶಿ ಲೀಲಾ ನಾಯ್ಕ, ಪ್ರಮುಖರಾದ ಶಾಂತಾರಾಮ ನಾಯಕ, ಗೌರೀಶ ನಾಯಕ, ಸಂತೋಷ ನಾಯ್ಕ, ಎಚ್.ಬಿ.ನಾಯಕ ಪಾಲ್ಗೊಂಡಿದ್ದರು. ತಹಶೀಲ್ದಾರ ವಿವೇಕ ಶೇಣ್ವಿ ಮನವಿ ಸ್ವೀಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.