ಭಟ್ಕಳ: ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಪೈಕಿ ನಾಲ್ವರನ್ನು ಇಲ್ಲಿನ ನಗರಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜಾಲಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಬದ್ರಿಯಾ ಕಾಲೊನಿ ನಿವಾಸಿಗಳಾದ ಅಬ್ದುಲ್ ರೆಹಮಾನ, ಅಬ್ದುಲ್ ಮಜೀದ್, ಜೀಯಾ ಶೇಖ್, ಉಸ್ಮಾ ಸ್ಟ್ರೀಟ್ನ ಬಿಲಾಲ ಅಹ್ಮದ್ ಎಂದು ಗುರುತಿಸಲಾಗಿದೆ.
ಮೇ 6ರಂದು ಪಟ್ಟಣದ ಮಗ್ದೂ ಕಾಲೊನಿ ನಿವಾಸಿ ಇಬ್ರಾಹಿಂ ಅಶ್ರಫ್ ಎಂಬ ರಿಕ್ಷಾ ಚಾಲಕನನ್ನು ಬದ್ರಿಯಾ ಕಾಲೊನಿಯ ಐವರು ಕಾರಿನಲ್ಲಿ ಹಿಂಬಾಲಿಸಿ ಕೊಂಡು ಬಂದು, ಬಂದರರೋಡ್ 2 ಕ್ರಾಸಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಚಾಲಕನನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಕುರಿತು ದೂರು–ಪ್ರತಿದೂರು ದಾಖಲಾಗಿತ್ತು. ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದ ಕುರಿತು ರಿಕ್ಷಾ ಚಾಲಕ ಮಾಲೀಕ ಸಂಘದವರು ಅಸಮಾಧಾನ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.