ADVERTISEMENT

ಸಿ.ಎಂ.ಗೆ ಕಪ್ಪು ಬಾವುಟ ಪ್ರದರ್ಶನ: ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2017, 6:37 IST
Last Updated 5 ಡಿಸೆಂಬರ್ 2017, 6:37 IST

ಕಾರವಾರ: ‘ಯಲ್ಲಾಪುರ ಪಟ್ಟಣ ಪಂಚಾಯ್ತಿಯಿಂದ ಬೇರ್ಪಡಿಸಿರುವ ಸಹಸ್ರಳ್ಳಿ, ಕೊಂಡೆಮನೆ ವಾರ್ಡ್‌ಗಳನ್ನು ಯಾವುದೇ ಗ್ರಾಮ ಪಂಚಾಯ್ತಿಗೆ ಸೇರಿಸದ ಕಾರಣ ಇಲ್ಲಿನ ಜನರು ಪರದಾಡುವಂತಾಗಿದೆ. ಈ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಪ್ರವಾಸದ ವೇಳೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಯಲ್ಲಾಪುರ ತಾಲ್ಲೂಕು ಸಮಿತಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ.

‘ಈ ಕುರಿತು ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ನ.27ರಂದು ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ ಮುಖ್ಯಮಂತ್ರಿಗೆ ಮನವಿಯನ್ನು ಕೂಡ ರವಾನಿಸಲಾಗಿದೆ. ಆದರೆ ಈವರೆಗೂ ಯಾವುದೇ ಪ್ರಯೋ ಜನವಾಗಿಲ್ಲ’ ಎಂದು ದೂರಿದರು.

‘ಈ ಗ್ರಾಮಗಳನ್ನು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಕೂಡಲೇ ಮನದಟ್ಟು ಮಾಡಿ, ಅದರ ಪ್ರತಿಕ್ರಿಯೆಯನ್ನು ತಿಳಿಸಬೇಕು. ಒಂದೊಮ್ಮೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಡಿ.6 ಮತ್ತು 7ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ’ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.