ADVERTISEMENT

ದೂರಿನ ಬಗ್ಗೆ ಗೊತ್ತಿಲ್ಲ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 26 ಮೇ 2017, 8:42 IST
Last Updated 26 ಮೇ 2017, 8:42 IST

ವಿಜಯಪುರ: ‘ಶಾಸಕ ಜಿ.ಟಿ.ದೇವೇಗೌಡ ಯಾವ ಕಾರಣಕ್ಕೆ ರಾಷ್ಟ್ರೀಯ ಅಧ್ಯಕ್ಷರಿಗೆ ದೂರು ನೀಡಲು ಮುಂದಾಗಿದ್ದಾರೆ ಎಂಬುದು ಗೊತ್ತಿಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

‘ಮೈಸೂರಿನಲ್ಲಿ ಕೆಲ ಬೆಳವಣಿಗೆ ನಡೆದಿವೆ. ಪಕ್ಷ ತೆಗೆದುಕೊಳ್ಳುವ ನಿರ್ಧಾರ ಕೆಲವರಿಗೆ ಸಮಾಧಾನ, ಉಳಿದವರಿಗೆ ಅಸಮಾಧಾನ ತರುವುದು ಸಹಜ. ಬೆಂಗಳೂರಿಗೆ ಮರಳಿದ ತಕ್ಷಣ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯುತ್ತೇನೆ’ ಎಂದು ಗುರುವಾರ ಇಲ್ಲಿನ ಸೈನಿಕ ಶಾಲೆಯ ಹೆಲಿಪ್ಯಾಡ್‌ನಲ್ಲಿ ಪತ್ರಕರ್ತರಿಗೆ ತಿಳಿಸಿದರು.

‘ಕಾಂಗ್ರೆಸ್‌ನ ಇಬ್ಬರು ಸಚಿವರು ಹೈದರಾಬಾದ್‌ಗೆ ತೆರಳಿ ನನ್ನ ವಿರುದ್ಧ ಸಿ.ಡಿ ಮಾಡಿಸಲು ಯತ್ನಿಸಿದ್ದರು, ಆದರೆ ಅದು ಸಾಧ್ಯವಾಗಲಿಲ್ಲ’ ಎಂದರು.‘ವಿಜಯಪುರ ಜಿಲ್ಲೆಯಿಂದ ಚುನಾ ವಣೆಗೆ ಸ್ಪರ್ಧಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ. ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಶೀಘ್ರದಲ್ಲೇ ತೀರ್ಮಾನಿಸುತ್ತೇನೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.