ADVERTISEMENT

ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಂಧನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2017, 10:02 IST
Last Updated 6 ನವೆಂಬರ್ 2017, 10:02 IST

ವಿಜಯಪುರ: ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹುಬ್ಬಳ್ಳಿಯಲ್ಲಿ ನಡೆದ ರ‍್ಯಾಲಿಯಲ್ಲಿ ವೀರಶೈವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ದೂರಿ ವೀರಶೈವ ಲಿಂಗಾಯತ ಮುಖಂಡರು ಭಾನುವಾರ ರಾತ್ರಿ ನಗರದ ಸಿದ್ಧೇಶ್ವರ ದೇಗುಲದ ಮುಂದೆ ಪ್ರತಿಭಟನೆ ನಡೆಸಿದರು. ಸ್ವಾಮೀಜಿಯವರ ಪ್ರತಿಕೃತಿ ದಹಿಸಿದರು.

ಪ್ರಚೋದನಕಾರಿ ಹೇಳಿಕೆ ನೀಡಿರುವ ಸ್ವಾಮೀಜಿ ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸ್ವಾಮೀಜಿಯ ಭಾವಚಿತ್ರಕ್ಕೆ ಕಪ್ಪು ಪಟ್ಟಿ ಅಂಟಿಸಿ, ವಾಕ್‌ ಸ್ವಾತಂತ್ರ್ಯ ದುರ್ಬಳಕೆ ಮಾಡಿಕೊಂಡು, ಸಮಾಜಕ್ಕೆ ಕಳಂಕ ತರಬೇಡಿ ಎಂದು ಇದೇ ಸಂದರ್ಭದಲ್ಲಿ ಆಗ್ರಹಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT