ADVERTISEMENT

‘ಬಿಎಸ್‌ವೈ ಗೆಲುವು ಸುಲಭ’

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 5:44 IST
Last Updated 22 ಸೆಪ್ಟೆಂಬರ್ 2017, 5:44 IST

ಇಂಡಿ: ‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಇಂಡಿ ಮತಕ್ಷೇತ್ರದಿಂದ ಸ್ಪರ್ಧಿಸಿದರೆ ಅವರ ಗೆಲುವು ಸುಲಭವಾಗಲಿದೆ’ ಎಂದು ಬಿಜೆಪಿಯ ಜಿಲ್ಲಾ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶೀಲವಂತ ಉಮರಾಣಿ ಹೇಳಿದರು.

‘ಪಕ್ಷವನ್ನು ಕಟ್ಟಲು ಶ್ರಮಿಸಿದ ಬಿ.ಎಸ್‌.ಯಡಿಯೂರಪ್ಪ ಇಲ್ಲಿ ಸ್ಪರ್ಧಿಸಿ, ಗೆದ್ದರೆ ಗಡಿಭಾಗದ ಅಭಿವೃದ್ಧಿಗೆ ಅನುಕೂಲವಾಗಲಿದೆ’ ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಯಡಿಯೂರಪ್ಪ ಅವರನ್ನು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಆರಿಸಿ ತರುತ್ತೇವೆ.

ಜೊತೆಗೆ ನೆರೆಯ ಹೈದರಾಬಾದ್‌ ಕರ್ನಾಟಕ ಭಾಗದಲ್ಲಿಯೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗುವುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರಾದ ಜಿ.ಎಸ್.ಬಂಕೂರ, ಎಸ್.ಎಸ್.ರೂಗಿಮಠ, ರಾಮಸಿಂಗ ಕನ್ನೊಳ್ಳಿ, ರಮೇಶ ಧರೇನವರ, ಜಟ್ಟೆಪ್ಪ ಮರಡಿ, ಜಿ.ಎಸ್.ಬಂಕೂರ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.