ADVERTISEMENT

ಅಂಗವಿಕಲರ ಸೌಲಭ್ಯಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2017, 4:49 IST
Last Updated 19 ಏಪ್ರಿಲ್ 2017, 4:49 IST
ಯಾದಗಿರಿ: 2016–17 ನೇ ಸಾಲಿನ ಎಸ್‌ಎಫ್‌ಸಿ ಯೋಜನೆಯಲ್ಲಿನ ಶೇ7.25ರಷ್ಟು  ಬಡ ಅಂಗವಿಕಲ ಫಲಾನುಭವಿಗಳಿಗಾಗಿ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವಿವಿಧ ಸೌಲಭ್ಯಗಳಿಗಾಗಿ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಿದೆ. 
 
ಕಂಪ್ಯೂಟರ್ ತರಬೇತಿಗಾಗಿ 5 ಫಲಾನುಭವಿಗಳು, ಕಂಪ್ಯೂಟರ್ ಪ್ರೋಗ್ರಾಮಿಂಗ್(ಸಿಪಿಸಿ) ತರಬೇತಿ 5 ಫಲಾನುಭವಿಗಳು, ಲಘು ವಾಹನ ಚಾಲನೆ ತರಬೇತಿಗಾಗಿ 20 ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಗುವುದು.
 
ಏ.20 ರಿಂದ ಅರ್ಜಿಗಳನ್ನು ಪಡೆದು ಮೇ 5ರ ಒಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಗೆ ಸಲ್ಲಿಸಬೇಕು. ಅಪೂರ್ಣ ದಾಖಲೆ ಮತ್ತು ಕೊನೆಯ ದಿನಾಂಕ ಮುಗಿದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
 
ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ 08479–222010 ಗೆ ಸಂಪರ್ಕಿಸಬಹುದು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.