ADVERTISEMENT

ಗುಡುಗು ಸಹಿತ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2017, 7:04 IST
Last Updated 8 ಸೆಪ್ಟೆಂಬರ್ 2017, 7:04 IST

ಯಾದಗಿರಿ: ನಗರದಲ್ಲಿ ಗುರುವಾರ ಸಂಜೆಯಿಂದ ರಾತ್ರಿ 9.30ರವರೆಗೆ ಗುಡುಗು ಸಹಿತ ಭಾರಿ ಮಳೆಯಾಯಿತು. ಇದರಿಂದ ಜನರು ಕೊಂಚ ತೊಂದರೆಗೆ ಒಳಗಾದರು.
ಮಳೆಯಿಂದ ಚಿತ್ತಾಪುರ ರಸ್ತೆ ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು.

ಬಸವೇಶ್ವರ, ಲಕ್ಷ್ಮಿ ನಗರ, ಗ್ರಾಮೀಣ ಪೊಲೀಸ್ ಠಾಣೆ ಸುತ್ತಮುತ್ತ, ಕನಕನಗರ, ಕೋಲಿವಾಡ, ಕೊಟಗೇರವಾಡ ಪ್ರದೇಶಗಳಲ್ಲಿ ಚರಂಡಿಗಳು ಉಕ್ಕಿ ಹರಿದ ಕಾರಣ ಜನ ಸಂಚಾರಕ್ಕೂ ತೊಂದರೆ ಉಂಟಾಯಿತು. ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT