ADVERTISEMENT

ನೀರಿನಲ್ಲಿ ಮುಳುಗಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2017, 6:50 IST
Last Updated 4 ಸೆಪ್ಟೆಂಬರ್ 2017, 6:50 IST

ಯಾದಗಿರಿ: ಸಮೀಪದ ಸೈದಾಪುರದಲ್ಲಿ ಶನಿವಾರ ತಡರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಬಾವಿಗಿಳಿದ ಯುವಕ ಖತಲಸಾಬ (32) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಖತಲಸಾಬ ಸೇರಿದಂತೆ ನಾಲ್ವರು ಯುವಕರು ಬಾವಿಗಳಿದಿದ್ದರು. ಆದರೆ, ಖತಲಸಾಬ ನೀರಿನಲ್ಲಿ ಮುಳುಗಿದ್ದು, ಮೇಲಕ್ಕೆ ಬರಲಿಲ್ಲ. ನಂತರ ಯುವಕರು ಹುಡುಕಾಡಿದರೂ ಸಿಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಭಾನುವಾರ ಮೀನುಗಾರರು ಬಾವಿಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚಿದರು. ಸೈದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧಿಕಾರಿಗಳ ವಿರುದ್ಧ ಆಕ್ರೋಶ: ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ನೀಡುವ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ವಿಸರ್ಜನೆ ವೇಳೆ ಅನುಸರಿಸಬೇಕಾದ ಕ್ರಮಗಳನ್ನು ಕೈಗೊಂಡಿಲ್ಲ. 

ADVERTISEMENT

ಗಣೇಶ ವಿಸರ್ಜನೆಗೆ ತಾತ್ಕಾಲಿಕ ಹೊಂಡಗಳನ್ನು ನಿರ್ಮಿಸಬೇಕೆಂಬ ಜಿಲ್ಲಾಧಿಕಾರಿಯ ಆದೇಶವನ್ನು ಇಲ್ಲಿನ ಪಿಡಿಒ ಉಲ್ಲಂಘಿಸಿದ್ದಾರೆ. ತಾತ್ಕಾಲಿಕ ಹೊಂಡ ನಿರ್ಮಿಸಿದ್ದರೆ ಇಂತಹ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ. ಯುವಕನ ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳೇ ನೇರ ಹೊಣೆ ಎಂದು ಗ್ರಾಮದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.