ADVERTISEMENT

ಪಿಡ್ಡನಾಯಕ ಶಿವಸೇನೆ ಅಭ್ಯರ್ಥಿ, ಎಂಇಪಿಯಿಂದ ರಾಮಪ್ಪನಾಯಕ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 7:10 IST
Last Updated 19 ಏಪ್ರಿಲ್ 2018, 7:10 IST
ಪಿಡ್ಡನಾಯಕ
ಪಿಡ್ಡನಾಯಕ   

ಸುರಪುರ: ಸಂಘ ಪರಿವಾರದ ಹಿರಿಯ ಮುಖಂಡ ರಾಜಾ ಪಿಡ್ಡನಾಯಕ ಪ್ಯಾಪ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಶಿವಸೇನೆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಹಲವು ವರ್ಷಗಳಿಂದ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

ಬಿಜೆಪಿಯಲ್ಲಿ ಟಿಕೆಟ್‌ ಸಿಗದಿದ್ದರಿಂದ ಅಸಮಾಧಾನಗೊಂಡು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಏಪ್ರಿಲ್‌ 21 ರಂದು ಶಿವಸೇನೆ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಪಿಡ್ಡನಾಯಕ ತಿಳಿಸಿದ್ದಾರೆ.

ನಗರಸಭೆ ಮಾಜಿ ಸದಸ್ಯ ರಾಜಾ ರಾಮಪ್ಪನಾಯಕ ಜೇಜಿ ಅವರು ಸುರಪುರ ಮತಕ್ಷೇತ್ರದಿಂದ ಎಂಇಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ADVERTISEMENT

ಎಂಇಪಿ ಪಕ್ಷದಿಂದ ತಮಗೆ ಟಿಕೆಟ್‌ ನೀಡಲಾಗಿದ್ದು, ಏಪ್ರಿಲ್‌ 22 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ರಾಜಾ ರಾಮಪ್ಪನಾಯಕ ಜೇಜಿ ಹೇಳಿದರು.

‘ಜೆಡಿಎಸ್‌ ಪಕ್ಷದಲ್ಲಿ ನಿಷ್ಠಾವಂತರನ್ನು ಕಡೆಗಣಿಸಿದ್ದರಿಂದ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.