ADVERTISEMENT

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಆಸ್ಪತ್ರೆಗೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 19:30 IST
Last Updated 20 ಏಪ್ರಿಲ್ 2018, 19:30 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಜಗಳೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೊಂದಲ ಮುಂದುವರಿದಿದ್ದು, ಶಾಸಕ ಎಚ್.ಪಿ. ರಾಜೇಶ್‌ ಮತ್ತು ಪುಷ್ಪಾ ಲಕ್ಷ್ಮಣಸ್ವಾಮಿ ಅವರಲ್ಲಿ ಅಂತಿಮವಾಗಿ ಯಾರಿಗೆ ‘ಬಿ’ ಫಾರಂ ನೀಡಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

‘ರಾಜೇಶ್‌ ಅವರಿಗೇ ಟಿಕೆಟ್‌ ನೀಡಲಾಗುವುದು’ ಎಂದು ಪುಷ್ಪಾ ಅವರಿಗೆ ಮುಖ್ಯಮಂತ್ರಿ ಗುರುವಾರ ತಿಳಿಸಿದ್ದರು. ಇದರಿಂದ ಪುಷ್ಪಾ ಖಿನ್ನತೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದಲ್ಲಿ ಮೊದಲ ಬಾರಿಗೆ ಬುಡಕಟ್ಟು ಮಹಿಳೆಗೆ ಘೋಷಣೆಯಾಗಿದ್ದ ಟಿಕೆಟ್‌ ರದ್ದುಗೊಳಿಸಿ ಬೇರೊಬ್ಬರಿಗೆ ನೀಡುವ ಮೂಲಕ ಅನ್ಯಾಯ ಮಾಡಲಾಗಿದೆ ಎಂದು ಪುಷ್ಪಾ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್‌ ಹೈಕಮಾಂಡ್‌, ಸದ್ಯಕ್ಕೆ ‘ಬಿ’ ಫಾರಂ ತಡೆಹಿಡಿಯುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಸೂಚಿಸಿದೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.