ಬೆಂಗಳೂರು: ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.
ಇನ್ನೆರಡು ಮಹತ್ವದ ಕ್ಷೇತ್ರಗಳಾದ ಯಶವಂತಪುರ ಮತ್ತು ಮೈಸೂರಿನ ವರುಣಾಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಆದರೆ, ಮಂಡ್ಯಕ್ಕೆ ಸಿ.ಶಿವಣ್ಣ, ಮಧುಗಿರಿಗೆ ರಮೇಶ್, ಹಾಸನಕ್ಕೆ ಪ್ರೀತಂ ಗೌಡ, ಅರಸೀಕೆರೆಗೆ ಮರಿಸ್ವಾಮಿ ಮತ್ತು ಸಕಲೇಶಪುರಕ್ಕೆ ಬಿ.ಸೋಮಶೇಖರ್ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
11 ಅಭ್ಯರ್ಥಿಗಳ ಅಂತಿಮ ಪಟ್ಟಿ ಸೋಮವಾರ ಘೋಷಣೆ ಆಗಬಹುದು. ಈ ಹಿಂದೆ ಪ್ರಕಟಗೊಂಡ ಪಟ್ಟಿಯಲ್ಲಿ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳು ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.