ADVERTISEMENT

ರಾಜಭವನ ತಲುಪಿದ ಕಾಂಗ್ರೆಸ್‌–ಜೆಡಿಎಸ್‌ ಶಾಸಕರು; ಪಕ್ಷದ ಹತ್ತು ಶಾಸಕರಿಗೆ ಮಾತ್ರ ರಾಜ್ಯಪಾಲರ ಭೇಟಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 16 ಮೇ 2018, 11:57 IST
Last Updated 16 ಮೇ 2018, 11:57 IST
ರಾಜಭವನ ತಲುಪಿದ ಕಾಂಗ್ರೆಸ್‌–ಜೆಡಿಎಸ್‌ ಶಾಸಕರು; ಪಕ್ಷದ ಹತ್ತು ಶಾಸಕರಿಗೆ ಮಾತ್ರ ರಾಜ್ಯಪಾಲರ ಭೇಟಿಗೆ ಅವಕಾಶ
ರಾಜಭವನ ತಲುಪಿದ ಕಾಂಗ್ರೆಸ್‌–ಜೆಡಿಎಸ್‌ ಶಾಸಕರು; ಪಕ್ಷದ ಹತ್ತು ಶಾಸಕರಿಗೆ ಮಾತ್ರ ರಾಜ್ಯಪಾಲರ ಭೇಟಿಗೆ ಅವಕಾಶ   

ಬೆಂಗಳೂರು: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ರಾಜಭವನ ತಲುಪಿದ್ದು, ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಅವಕಾಶ ಕೋರಲಿದ್ದಾರೆ.

ರಾಜ್ಯಪಾಲ ವಜುಬಾಯಿ ವಾಲಾ ಅವರು ಶಾಸಕರ ಭೇಟಿಗೆ 5:00ಕ್ಕೆ ಸಮಯ ನೀಡಿದ್ದರು. ಸಮಯಕ್ಕೂ ಮುನ್ನವೇ ರಾಜಭವನ ಬಳಿ ತಲುಪಿದ ಎಚ್‌.ಡಿ.ಕುಮಾರಸ್ವಾಮಿ ಅವರ ಪ್ರವೇಶಕ್ಕೆ ಪೊಲೀಸರು ಅವಕಾಶ ನೀಡದೆ, ಪ್ರವೇಶ ದ್ವಾರದಲ್ಲಿಯೇ ತಡೆದರು.

(ರಾಜಭವನದ ಸಮೀಪ ಶಾಸಕರು– ಚಿತ್ರ ಕೃಪೆ: ಇಂಡಿಯನ್‌ ಎಕ್ಸ್‌ಪ್ರೆಸ್‌)

ADVERTISEMENT

ಎಲ್ಲ ಶಾಸಕರಿಗೂ ಭೇಟಿ ಅನುಮತಿ ನಿರಾಕರಿಸಿರುವ ರಾಜ್ಯಪಾಲರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ತಲಾ ಹತ್ತು ಶಾಸಕರಿಗೆ ಮಾತ್ರ ಅವಕಾಶ ನೀಡಿದ್ದಾರೆ. ರಾಜಭವನದೊಳಗೆ ಎಲ್ಲ ಶಾಸಕರಿಗೂ ಪ್ರವೇಶ ನಿರಾಕರಿಸಿದ್ದನ್ನು ವಿರೋಧಿಸಿ ಪ್ರತಿಭಟನೆಯೂ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.