ADVERTISEMENT

ರಾಮದಾಸ್‌ಗೆ ಟಿಕೆಟ್‌: ಕೃಷ್ಣರಾಜ ಕ್ಷೇತ್ರದಲ್ಲಿ ಭಿನ್ನಮತ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST

ಮೈಸೂರು: ಕೃಷ್ಣರಾಜ ಕ್ಷೇತ್ರದಲ್ಲಿ ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆಯಾದ ಬೆನ್ನಲೇ ಭಿನ್ನಮತ ಭುಗಿಲೆದ್ದಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಈ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಎಚ್‌.ವಿ. ರಾಜೀವ್‌ ಅವರನ್ನು ಒತ್ತಾಯಿಸಿದ್ದಾರೆ. ಶನಿವಾರ ಆಯೋಜಿಸಿದ್ದ ರಾಜೀವ್‌ ಬೆಂಬಲಿಗರ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.

‘ಟಿಕೆಟ್‌ ಕೈತಪ್ಪಿದ್ದರಿಂದ ಬೇಸರವಾಗಿರುವುದು ನಿಜ. 24 ಗಂಟೆ ಸಮಯಾವಕಾಶ ಕೊಡಿ. ನನ್ನ ಮುಂದಿನ ನಿಲುವು ತಿಳಿಸುತ್ತೇನೆ’ ಎಂದು ರಾಜೀವ್‌ ಹೇಳಿದರು. ಭಿನ್ನಮತ ಶಮನಗೊಳಿಸಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.