ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ನಿರಾಸಕ್ತಿ ತೋರಿದ್ದಾರೆ.
ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಆಸಕ್ತಿ ತೋರಿತ್ತು. ಅವರ ಹೆಸರನ್ನು ಮಾತ್ರ ಬಿಜೆಪಿ ಕ್ಷೇತ್ರ ಘಟಕದಿಂದ ಕಳುಹಿಸಲಾಗಿತ್ತು. ಬುಧವಾರ ಅಭ್ಯರ್ಥಿಯ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ. ಆದರೆ, ಮಂಗಳವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಪದ್ಮನಾಭ ರೆಡ್ಡಿ, ‘ನನ್ನ ಬದಲು ಕ್ಷೇತ್ರ ಘಟಕದ ಮಾಜಿ ಅಧ್ಯಕ್ಷ ಎಂ.ಎನ್.ರೆಡ್ಡಿ ಅವರನ್ನು ಕಣಕ್ಕಿಳಿಸಿ’ ಎಂದರು.
ರೆಡ್ಡಿ ಅವರು 2008ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 17,032 ಮತಗಳನ್ನು ಪಡೆದಿದ್ದರು. ಕಳೆದ ಚುನಾವಣೆ ವೇಳೆ ಬಿಜೆಪಿಗೆ ಸೇರಿದ್ದರು. ಅವರನ್ನು ಪಕ್ಷ ಕಣಕ್ಕೆ ಇಳಿಸಿತ್ತು. ಕೆ.ಜೆ. ಜಾರ್ಜ್ ಎದುರು 22,953 ಮತಗಳಿಂದ ಪರಾಭವಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.