ADVERTISEMENT

ಹೊಸ ಮುಖಗಳಿಗೆ ಮಣೆ: ಕೃಷ್ಣ ಬೇಸರ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST
ಎಂ.ಎಂ.ಕೃಷ್ಣ
ಎಂ.ಎಂ.ಕೃಷ್ಣ   

ಮಂಡ್ಯ: ಸಕ್ರಿಯ ರಾಜಕಾರಣದಲ್ಲಿ ಇಲ್ಲದ ಹೊಸ ಮುಖಗಳಿಗೆ ಮಂಡ್ಯ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿರುವುದಕ್ಕೆ ಪಕ್ಷದ ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಅವರು ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯ ಎನ್‌.ಶಿವಣ್ಣ ಕಳೆದ ವಾರ ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿದ್ದರು. ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂದೇ ಬಿಂಬಿತವಾಗಿತ್ತು. ಟಿಕೆಟ್‌ ನೀಡುವಂತೆ ಕೃಷ್ಣ ಅವರು ಮುಖಂಡರಿಗೆ ಸಲಹೆ ಮಾಡಿದ್ದರು. ಆದರೆ ಶಿವಣ್ಣ ಅವರಿಗೆ ಟಿಕೆಟ್‌ ಕೈತಪ್ಪಿದ್ದು, ರಾಜಕಾರಣದಿಂದ ಹಿಂದೆ ಸರಿದಿರುವ ಮುಡಾ ಮಾಜಿ ಅಧ್ಯಕ್ಷ ಬಿ.ಬಸವೇಗೌಡ ಅವರಿಗೆ ಟಿಕೆಟ್‌ ನೀಡಲಾಗಿದೆ. ಅವರು ಟಿಕೆಟ್‌ಗಾಗಿ ಅರ್ಜಿಯನ್ನೂ ಹಾಕಿರಲಿಲ್ಲ.

ಮದ್ದೂರು ಕ್ಷೇತ್ರದಲ್ಲಿ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಣ್‌ ಕುಮಾರ್‌ ಟಿಕೆಟ್‌ ನಿರೀಕ್ಷಿಸಿದ್ದರು. ಆದರೆ ಹೊಸ ಮುಖ ಸತೀಶ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದು ಎಸ್‌.ಎಂ.ಕೃಷ್ಣ ಅವರಲ್ಲಿ ಬೇಸರ ಮೂಡಿಸಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ADVERTISEMENT

‘ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಕೃಷ್ಣ ಜತೆ ಮಾತುಕತೆ ನಡೆಸಿದ್ದರು. ಮಂಡ್ಯ ಜಿಲ್ಲೆಯಲ್ಲಿ ಕೃಷ್ಣ ಸೂಚಿಸಿದವರಿಗೆ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.