ADVERTISEMENT

ಜೆಡಿಎಸ್‌ನ ಇಬ್ಬರು ಶಾಸಕರು ಇಂದು ಬಿಜೆಪಿಗೆ?

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:34 IST
Last Updated 8 ಫೆಬ್ರುವರಿ 2018, 9:34 IST

ರಾಯಚೂರು/ಬೆಂಗಳೂರು: ಜೆಡಿಎಸ್‌ ಶಾಸಕರಾದ ಮಾನಪ್ಪ ವಜ್ಜಲ(ಲಿಂಗಸುಗೂರು) ಮತ್ತು ಡಾ.ಶಿವರಾಜ ಪಾಟೀಲ (ರಾಯಚೂರು ನಗರ) ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.

‘ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಈ ಇಬ್ಬರು ಗುರುವಾರ ಪಕ್ಷ ಸೇರಲಿದ್ದಾರೆ’ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬೆಳಿಗ್ಗೆ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಈ ಇಬ್ಬರು ಶಾಸಕರು, ಬಳಿಕ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ADVERTISEMENT

‘ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳದ ಈ ಇಬ್ಬರಿಗೆ ಟಿಕೆಟ್ ನೀಡಬಾರದು’ ಎಂದು ರಾಯಚೂರು ಜಿಲ್ಲೆಯ ಜೆಡಿಎಸ್ ಪದಾಧಿಕಾರಿಗಳು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಮಾನಪ್ಪ ವಜ್ಜಲ ಬೆಂಬಲಕ್ಕೆ ನಿಂತಿರುವ ಲಿಂಗಸುಗೂರು ತಾಲ್ಲೂಕು ಜೆಡಿಎಸ್ ಪದಾಧಿಕಾರಿಗಳು ಪಕ್ಷದ ಅಧ್ಯಕ್ಷ ಕುಮಾರಸ್ವಾಮಿಗೆ ಈಗಾಗಲೇ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.