ಬೆಂಗಳೂರು: ಕ್ಯಾನ್ಸರ್ನಿಂದ ಬಳಲುತ್ತಿರುವ ಕನ್ನಡದ ಗಾಯಕ, ಸಂಗೀತ ನಿರ್ದೇಶಕ ಎಲ್.ಎನ್.ಶಾಸ್ತ್ರಿ ಅವರಿಗೆ ಆರ್ಥಿಕ ಸಹಾಯ ಮಾಡಲು ನಟ ಜಗ್ಗೇಶ್ ಮುಂದಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ನಟ ಜಗ್ಗೇಶ್, ‘ನಾನು ಅಭಿನಯಿಸಿರುವ ಚಿತ್ರಗಳಿಗೆ ಈ ಮಹನೀಯರು ಗೀತೆಗಳನ್ನು ಹಾಡಿದ್ದಾರೆ. ಅವರ ಅನಾರೋಗ್ಯದ ಸುದ್ದಿ ಕೇಳಿ ದುಃಖವಾಯಿತು. ದೇವರಂತಹ ಮನುಷ್ಯನಿಗೆ ಈ ಪರೀಕ್ಷೆ ಏಕೆ?, ರಾಯರ ದಯೆ ಇವರ ಮೇಲಿರಲಿ. ನಾನು ಅವರಿಗೆ ನೆರವಾಗುವೆ. ಈ ವಿಷಯವಾಗಿ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.