ಬೆಂಗಳೂರು: ತಮ್ಮ ವೃತ್ತಿ ಬದುಕಿನ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದ ವೇಳೆ ನಟ ಸುದೀಪ್ ನೀಡಿದ್ದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ನಟ ದರ್ಶನ್ ‘ನಾವಿಬ್ಬರು ಸ್ನೇಹಿತರಲ್ಲ’ ಎಂದು ಟ್ವೀಟ್ ಮಾಡಿದ್ದು ಭಾರಿ ಸುದ್ದಿಯಾಗಿದೆ.
‘ನಾನು ಹಾಗೂ ಸುದೀಪ್ ಸ್ನೇಹಿತರಲ್ಲ. ಕನ್ನಡಚಿತ್ರರಂಗಕ್ಕೆ ಕೆಲಸ ಮಾಡುತ್ತಿರುವ ಕಲಾವಿದರು ಅಷ್ಟೇ. ಇದನ್ನೆಲ್ಲ ಸುದ್ದಿ ಮಾಡದೆ ಇಲ್ಲಿಗೆ ಮುಗಿಸಿ’ ಎಂದು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.