ADVERTISEMENT

ಮಾತು ಮುಗಿಸಿದ ‘ಬದ್ಮಾಶ್’

ಸಿನಿಹನಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2015, 19:30 IST
Last Updated 27 ಜುಲೈ 2015, 19:30 IST

ರವಿ ಕಶ್ಯಪ್ ನಿರ್ಮಿಸುತ್ತಿರುವ ‘ಬದ್ಮಾಶ್’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಜೂಡಾ ಸ್ಯಾಂಡಿ ಸಂಗೀತ, ಯೋಗರಾಜ್‌ ಭಟ್ ಸಾಹಿತ್ಯವಿರುವ ಒಂದು ಹಾಡನ್ನು ಚಿತ್ರೀಕರಿಸಲಾಗಿದೆ. ಉಳಿದ ಹಾಡುಗಳ ಚಿತ್ರೀಕರಣ ಶೀಘ್ರ ಆರಂಭವಾಗಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದ ಈ ಚಿತ್ರಕ್ಕೆ ಶ್ರೀಶ ಕುಡುವಳ್ಳಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನವಿದೆ. 

ಧನಂಜಯ್ ನಾಯಕರಾಗಿ ಅಭಿನಯಿಸುತ್ತಿರುವ ಚಿತ್ರದ ನಾಯಕಿ ಸಂಚಿತಾ ಶೆಟ್ಟಿ. ಅಚ್ಯುತ ಕುಮಾರ್, ಜಹಾಂಗೀರ್, ರಮೇಶ್ ಭಟ್, ರಮೇಶ್ ಪಂಡಿತ್, ಬಿ. ಸುರೇಶ್, ಪ್ರಕಾಶ್ ಬೆಳವಾಡಿ, ಶ್ರೀನಿವಾಸ ಪ್ರಭು, ಬಿರಾದಾರ್, ಸುಚೇಂದ್ರ ಪ್ರಸಾದ್, ಪನ್ನಗಾಭರಣ, ಲಕ್ಷ್ಮೀ ಆನಂದ್, ಬೆಂಗಳೂರು ನಾಗೇಶ್, ಎಂ.ಎಸ್. ಉಮೇಶ್, ಗೌರೀಶ್ ಅಕ್ಕಿ, ಅವಿನಾಶ್ ಶೆಟ್ಟಿ ಮತ್ತಿತರರು ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.