ADVERTISEMENT

‘ದೇಶ ತೋರಿದ ಪ್ರೀತಿಗೆ ಆಭಾರಿ’

ಪಂಚರಂಗಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2015, 19:59 IST
Last Updated 30 ನವೆಂಬರ್ 2015, 19:59 IST

ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕಾರಣಕ್ಕೆ ನಟಿ ಜೂಹಿ ಚಾವ್ಲಾ ಇಂದಿರಾ ಗಾಂಧಿ ಸ್ಮಾರಕ ಪ್ರಶಸ್ತಿ ಪಡೆದಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜೂಹಿ ‘ದೇಶ ನನ್ನ ಮೇಲೆ ತೋರಿದ ಪ್ರೀತಿ ಹಾಗೂ ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ’ ಎಂದು ಭಾವುಕವಾಗಿ ನುಡಿದಿದ್ದಾರೆ. 

‘ಭಾರತದಲ್ಲಿ ಹುಟ್ಟಿದ್ದಕ್ಕಾಗಿ ನಾನು ಹೆಮ್ಮೆಪಡುತ್ತೇನೆ, ದೇಶ ನನಗೆ ತೋರಿದ  ಪ್ರೀತಿಗೆ ನಿಜಕ್ಕೂ ಹೆಮ್ಮೆ ಎನ್ನಿಸುತ್ತಿದೆ.  ಭಾರತ ತೋರಿದ ಪ್ರೀತಿ ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ’ ಎಂದು ಜೂಹಿ ಹೇಳಿದ್ದಾರೆ.

‘ದೇಶದ ಪ್ರತಿಯೊಬ್ಬರೂ ಸಮಾಜಕ್ಕೆ ಉಪಯುಕ್ತವಾಗುವ ಕೆಲಸಗಳನ್ನು ಮಾಡಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದೂ 48 ವರ್ಷದ ನಟಿ ಆಗ್ರಹಿಸಿದರು.

‘ದೇಶದ ಏಳಿಗೆಗಾಗಿ ಶ್ರಮಿಸಬೇಕು, ಸಕಾರಾತ್ಮಕವಾಗಿ ಯೋಚಿಸುವುದರೊಂದಿಗೆ ಇತರರಿಗೆ ಒಳಿತು ಮಾಡಬೇಕು’ ಎಂದು ಆಕೆ ಕರೆಕೊಟ್ಟಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.