ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರು ದೊಡ್ಡೇರಿ ವೆಂಕಟಗಿರಿರಾವ್ ಅವರ ‘ಇಷ್ಟಕಾಮ್ಯ’ ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡುತ್ತಿದ್ದಾರೆ. ಕಿರುತೆರೆಯ ಪ್ರತಿಭೆಗಳಾದ ವಿಜಯ್ ಸೂರ್ಯ (ಅಗ್ನಿಸಾಕ್ಷಿ), ಮಯೂರಿ (ಅಶ್ವಿನಿ ನಕ್ಷತ್ರ) ಮತ್ತು ಕಾವ್ಯ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಧಾರಿಗಳು. ಐವತ್ತು ದಿನಗಳಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಸುವ ಯೋಜನೆ ಇದೆ. ಚಿಕ್ಕಮಗಳೂರಿನ ಸಹ್ಯಾದ್ರಿ ಶ್ರೇಣಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಅಜನೀಶ್ ಲೋಕನಾಥ್ ರಾಗ ಸಂಯೋಜನೆ, ರವಿಕುಮಾರ್ ಸನಾ ಛಾಯಾಗ್ರಹಣ ಚಿತ್ರಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.