ADVERTISEMENT

ಅಕ್ರಮ ಹಣ ವರ್ಗಾವಣೆ: ಜಾವೇದ್‌ ಹೇಳಿಕೆ ಪಡೆದ ಜಾರಿ ನಿರ್ದೇಶನಾಲಯ

ಪಿಟಿಐ
Published 24 ಮೇ 2017, 19:36 IST
Last Updated 24 ಮೇ 2017, 19:36 IST
ಅಕ್ರಮ ಹಣ ವರ್ಗಾವಣೆ: ಜಾವೇದ್‌  ಹೇಳಿಕೆ ಪಡೆದ ಜಾರಿ ನಿರ್ದೇಶನಾಲಯ
ಅಕ್ರಮ ಹಣ ವರ್ಗಾವಣೆ: ಜಾವೇದ್‌ ಹೇಳಿಕೆ ಪಡೆದ ಜಾರಿ ನಿರ್ದೇಶನಾಲಯ   

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಬುಧವಾರ ಗೀತ ರಚನೆಕಾರ ಜಾವೇದ್‌ ಅಖ್ತರ್ ಅವರ ಹೇಳಿಕೆ ಪಡೆದಿದೆ.

‘ಅಖ್ತರ್‌ ಅವರೇ ಪ್ರಕರಣದ ಬಗ್ಗೆ ದೂರು ನೀಡಿದ್ದರು. ಹೆಚ್ಚಿನ ಮಾಹಿತಿ ಪಡೆಯಲು ಅವರ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ.

ಅಖ್ತರ್‌ ಅವರು ನಿರ್ದೇಶಕ ಮಂಡಳಿ ಅಧ್ಯಕ್ಷರಾಗಿರುವ ಇಂಡಿಯನ್‌ ಪರ್ಫಾರ್ಮಿಂಗ್‌ ರೈಟ್‌ ಸೊಸೈಟಿ ಲಿಮಿಟೆಡ್‌ (ಐಪಿಆರ್ಎಸ್‌)  ತನ್ನ ಸದಸ್ಯರಿಗೆ ಬಾಕಿ ಪಾವತಿಸಿಲ್ಲ ಎಂದು ಆರೋಪಿಸಲಾಗಿತ್ತು.

‘ವಿಚಾರಣೆಗೆ ಪ್ರತಿನಿಧಿಯೊಬ್ಬರನ್ನು ಕಳುಹಿಸುವಂತೆ ಅಖ್ತರ್‌ ಅವರಿಗೆ ಸೂಚಿಸಲಾಗಿತ್ತು. ತನಿಖಾಧಿಕಾರಿಗಳಿಗೆ ಸಹಕಾರ ನೀಡಲು ಅವರೇ ಬಂದಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.