ADVERTISEMENT

ಅಪೋಲೊ ಆಸ್ಪತ್ರೆ ಮುಂದೆ ಅಭಿಮಾನಿಗಳ ನೂಕುನುಗ್ಗಲು: ಪೊಲೀಸರ ಹರಸಾಹಸ

ಧ್ವಜ ಮೇಲಕ್ಕೇರಿಸಿದ ಎಐಎಡಿಎಂಕೆ

ಪಿಟಿಐ
Published 5 ಡಿಸೆಂಬರ್ 2016, 13:03 IST
Last Updated 5 ಡಿಸೆಂಬರ್ 2016, 13:03 IST
ಅಪೋಲೊ ಆಸ್ಪತ್ರೆ ಮುಂದೆ ಅಭಿಮಾನಿಗಳ ನೂಕುನುಗ್ಗಲು: ಪೊಲೀಸರ ಹರಸಾಹಸ
ಅಪೋಲೊ ಆಸ್ಪತ್ರೆ ಮುಂದೆ ಅಭಿಮಾನಿಗಳ ನೂಕುನುಗ್ಗಲು: ಪೊಲೀಸರ ಹರಸಾಹಸ   

ಚೆನ್ನೈ: ತಮಿಳುನಾಡು ಮುಖ್ಯಂಮಂತ್ರಿ ಜೆ.ಜಯಲಲಿತಾ ಅವರು ನಿಧನರಾಗಿದ್ದಾರೆ ಎಂದು ಚೆನ್ನೈನ ಅಪೋಲೊ ಆಸ್ಪತ್ರೆ ಮುಂದೆ ಅಭಿಮಾನಿಗಳು ಆಕ್ರಂದನ ವ್ಯಕ್ತಪಡಿಸಿ, ನೂಕುನುಗ್ಗಲು ಆರಂಭಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಭಾರಿ ಸಂಖ್ಯೆಯಲ್ಲಿ ನೆರೆದಿರುವ ಜನರು ಬ್ಯಾರಿಕೇಡ್‌ಗಳನ್ನು ತಳ್ಳಿ ಆಸ್ಪತ್ರೆಯತ್ತ ನುಗ್ಗಲು ಯತ್ನಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಜನರನ್ನು ಚದುರಿಸಲು ಲಾಠಿ ಬೀಸಿದ್ದಾರೆ.

ಅತ್ತ ಎಐಎಡಿಎಂಕೆ ಪಕ್ಷದ ಕಚೇರಿ ಮೇಲೆ ಧ್ವಜವನ್ನು ಅರ್ಧಕ್ಕೆ ಇಳಿಸಲಾಗಿತ್ತು, ಬಳಿಕ ಧ್ವಜವನ್ನು ಮೇಲಕ್ಕೇರಿಸಲಾಯಿತು. ಈ ವೇಳೆ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಘೋಷಣೆ ಕೂಗಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.