ನವದೆಹಲಿ (ಪಿಟಿಐ): ಉತ್ತರ ಪ್ರದೇಶದ ಕೋಮುಗಲಭೆಗ್ರಸ್ತ ಪ್ರದೇಶಗಳಲ್ಲಿ ಚುನಾವಣಾ ಭಾಷಣದ ವೇಳೆ ‘ಸೇಡು ತೀರಿಸಿಕೊಳ್ಳಲು’ ಕರೆ ನೀಡಿದ್ದ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಶಾಮ್ಲಿ, ಬಿಜ್ನೋರ್ ಮತ್ತು ಮುಜಪ್ಫರ್ನಗರ ಜಿಲ್ಲೆಗಳಲ್ಲಿ ಮಾಡಿದ ಭಾಷಣದಲ್ಲಿ ಸೇಡು ತೀರಿಸಿಕೊಳ್ಳಲು ಕರೆ ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೇ ಕಂಡುಬಂದಿದೆ.
ಹೀಗಾಗಿ ತಮ್ಮ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು ಎಂಬುದಕ್ಕೆ ಮೂರು ದಿನಗಳೊಳಗೆ ವಿವರಣೆ ನೀಡಬೇಕು ಎಂದು ಆಯೋಗ ನೋಟಿಸ್ನಲ್ಲಿ ಸೂಚಿಸಿದೆ. ಏ.9ರ ಸಂಜೆ 5 ಗಂಟೆಯೊಳಗೆ ವಿವರಣೆ ನೀಡದಿದ್ದರೆ ಯಾವ ಸೂಚನೆಯನ್ನೂ ನೀಡದೆ ಆಯೋಗ ಕ್ರಮ ತೆಗೆದುಕೊಳ್ಳಲಿದೆ ಎಂದೂ ಸ್ಪಷ್ಟಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.