ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪೂರ್ವ ಕರಾವಳಿ-ಯಲ್ಲಿ ಅವಧಿಗಿಂತ ಮೊದಲೇ ಮುಂಗಾರು ಮಳೆ ಆರಂಭವಾಗಲಿದೆ.
ಸದ್ಯ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಿಂದ ವಾಯವ್ಯ ದಿಕ್ಕಿನಲ್ಲಿ ಇರುವ ವಾಯುಭಾರ ಕುಸಿತ, ಮುಂದಿನ 24 ಗಂಟೆಗಳಲ್ಲಿ ತೀವ್ರವಾಗುವ ಸಾಧ್ಯತೆ ಇದೆ. ನಂತರ ಶುಕ್ರವಾರ ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್ ಕಡೆ ಸಾಗಲಿದೆ.
‘ವಾಯುಭಾರ ಕುಸಿತದಿಂದಾಗಿ ಅವಧಿಗೂ ಮುನ್ನ ಪೂರ್ವ ಕರಾವಳಿಗೆ ಮುಂಗಾರು ಅಪ್ಪಳಿಸುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆಯ ಮುಖ್ಯಸ್ಥ ಬಿ.ಪಿ.ಯಾದವ್ ಅವರು ತಿಳಿಸಿದ್ದಾರೆ.
ಈ ಮೊದಲು, ಜೂನ್ 5ರ ಆಸುಪಾಸು ಕೇರಳ ಕರಾವಳಿಗೆ ನೈರುತ್ಯ ಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಪೂರ್ವ ಭಾರತದಲ್ಲಿ ತಾಪಮಾನ ಹೆಚ್ಚಿದ್ದು, ಮೊದಲ ಮಳೆ ಈ ಪ್ರದೇಶದಲ್ಲಿ ಹಿತವಾದ ವಾತಾವರಣ ತರಲಿದೆ. ಆದರೆ, ಇದು ಈ ವರ್ಷ ಸಾಕಷ್ಟು ಮಳೆ ಸುರಿಯುವ ಸೂಚನೆ ಅಲ್ಲ ಎಂಬುದು ತಜ್ಞರ ಅಭಿಪ್ರಾಯ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.