ಗುವಾಹಟಿ (ಪಿಟಿಐ): ಬ್ರಹ್ಮಪುತ್ರ ನದಿ ಪ್ರವಾಹದಿಂದಾಗಿ ಅಸ್ಸಾಂನ ಲಖಿಂಪುರ, ದರಾಂಗ್, ಸೋನಿತ್ಪುರ ಹಾಗೂ ಉದಲ್ಗುರಿ ಜಿಲ್ಲೆಗಳಲ್ಲಿ 25 ಸಾವಿರ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ದರಾಂಗ್ನಲ್ಲಿ ನಾಲ್ಕು ಹಾಗೂ ಸೋನಿತ್ಪುರದಲ್ಲಿ ಒಂದು ಪರಿಹಾರ ಶಿಬಿರ ತೆರೆಯಲಾಗಿದೆ. 9,500ಕ್ಕೂ ಹೆಚ್ಚು ಮಂದಿ ಈ ಶಿಬಿರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.
ನುಮಲಿಗಡದಲ್ಲಿ ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಸೋನಿತ್ಪುರದಲ್ಲಿ ಬ್ರಹ್ಮಪುತ್ರ ನದಿಯ ಉಪನದಿ ಜೈಭಾರಲಿ ಅಪಾಯದ ಮಟ್ಟಕ್ಕಿಂತ ಮೇಲೆ ಹರಿಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.