ನವದೆಹಲಿ (ಪಿಟಿಐ): ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್ ವಿರುದ್ಧ ಹೂಡಿದ ಅಪರಾಧ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಪಾಲಿಸದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ನ್ಯಾಯಾಲಯದ ವೆಚ್ಚವಾಗಿ 10 ಸಾವಿರ ರೂಪಾಯಿಗಳ ದಂಡ ವಿಧಿಸಲಾಗಿದೆ.
ಶನಿವಾರದ ವಿಚಾರಣೆಗೆ ಮೂರು ದಿನಗಳ ಮೊದಲು ಪ್ರಮಾಣ ಪತ್ರ ಸಲ್ಲಿಸುವಂತೆ ಗಡ್ಕರಿ ಅವರಿಗೆ ಸೂಚಿಸಲಾಗಿತ್ತು. ಆದರೆ ಪ್ರಮಾಣ ಪತ್ರವನ್ನು ಶನಿವಾರ ಸಲ್ಲಿಸಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದರಿಂದ ದಂಡ ವಿಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೋಮತಿ ಮನೊಚಾ ತಿಳಿಸಿದರು.
ಕೆಜ್ರಿವಾಲ್ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಪ್ರಮಾಣ ಪತ್ರದ ಪ್ರತಿಯನ್ನು ಡಿಸೆಂಬರ್ 18ರಂದೇ ನೀಡಲಾಗಿದೆ ಮತ್ತು ನ್ಯಾಯಾಲಯಕ್ಕೂ ಸಲ್ಲಿಸಲಾಗಿದೆ ಎಂದು ಗಡ್ಕರಿ ಪರ ವಕೀಲರಾದ ಪಿಂಕಿ ಆನಂದ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.