ನವದೆಹಲಿ: ದೆಹಲಿ ವಿಧಾನಸಭೆಗೆ ಮರು ಚುನಾವಣೆ ನಡೆಸಲು ಆದೇಶಿಸಿದರೆ ಅದಕ್ಕೆ ಸಿದ್ಧವಿರುವುದಾಗಿ ಚುನಾವಣಾ ಆಯೋಗ ಹೇಳಿದೆ. ಒಂದು ವೇಳೆ ದೆಹಲಿ ವಿಧಾನಸಭೆ ವಿಸರ್ಜನೆಯಾದಲ್ಲಿ ಅಲ್ಲಿನ ಮೂರು ಕ್ಷೇತ್ರಗಳ ಉಪಚುನಾವಣೆಗೆ ಹೊರಡಿಸಿರುವ ಅಧಿಸೂಚನೆಯನ್ನು ಆಯೋಗ ವಾಪಸ್ ಪಡೆಯುತ್ತದೆ.
‘ವಿಧಾನಸಭೆ ವಿಸರ್ಜನೆಯಾಗಬಹುದು ಎಂದು ಆಯೋಗ ಎದುರು ನೋಡುತ್ತಿತ್ತು. ಆದರೆ ಇನ್ನೂ ಕಾಯುವುದಕ್ಕೆ ಸಾಧ್ಯವಿಲ್ಲ. ತೆರವಾದ ಸ್ಥಾನಗಳಿಗೆ ಆರು ತಿಂಗಳೊಳಗೆ ಚುನಾವಣೆ ನಡೆಸುವುದು ಆಯೋಗದ ಜವಾಬ್ದಾರಿ’ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.