ಹೈದರಾಬಾದ್: ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಆರ್ಜಿತ ಸೇವೆಯ ಟಿಕೆಟ್ಗಳನ್ನು ಆನ್ಲೈನ್ ಮೂಲಕವೇ ನೀಡುವ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ ಒಂದರಿಂದ ಈ ಕ್ರಮ ಜಾರಿಗೆ ಬರಲಿದೆ.
ಶ್ರೀ ವೆಂಕಟೇಶ್ವರ ದೇವರ ಆರ್ಜಿತ ಸೇವೆಯಲ್ಲಿ ಭಾಗವಹಿಸುವ ಭಕ್ತರು ಆನ್ಲೈನ್ ಮೂಲಕವೇ ಟಿಕೆಟ್ ಕಾದಿರಿಸಬೇಕು. ಟಿಕೆಟ್ ನೀಡಿಕೆಯಲ್ಲಿ ಪಾರದರ್ಶಕತೆ ತರುವುಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.
ಆರ್ಜಿತ ಸೇವೆಯ ಟಿಕೆಟ್ಗಳನ್ನು ಆರ್ಜಿತ ಕಚೇರಿಗೆ ಡಿಡಿ ಕಳುಹಿಸುವ ಮೂಲಕ ಕಾದಿರಿಸುವ ವ್ಯವಸ್ಥೆ ಈಗ ಇದೆ. ಆದರೆ ಡಿಸೆಂಬರ್ನಿಂದ ಈ ವ್ಯವಸ್ಥೆ ಇರುವುದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.