ADVERTISEMENT

ಆಹಾರ ಭದ್ರತೆ ಕಾಯ್ದೆ ಜಾರಿಗೆ ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 26 ಜೂನ್ 2014, 19:30 IST
Last Updated 26 ಜೂನ್ 2014, 19:30 IST

ನವದೆಹಲಿ (ಪಿಟಿಐ): ಆಹಾರ ಭದ್ರತೆ ಕಾಯ್ದೆ ಜಾರಿ ವಿಷಯವಾಗಿ ರಾಜ್ಯ ಸರ್ಕಾರಗಳಿಗೆ  ಇನ್ನೂ ಮೂರು ತಿಂಗಳು ಕಾಲಾವಕಾಶ ನೀಡಲು ಕೇಂದ್ರ ಸರ್ಕಾರ ಗುರುವಾರ ನಿರ್ಧರಿಸಿದೆ.

‘ಈ ಮೊದಲು ನೀಡಿದ ಗಡುವು ಜುಲೈ 4ಕ್ಕೆ ಕೊನೆಗೊಳ್ಳಲಿದೆ. ಇದನ್ನು ಇನ್ನೂ ಮೂರು ತಿಂಗಳು ವಿಸ್ತ­ರಿ­ಸ­ಲಾ­ಗುತ್ತದೆ’ ಎಂದು ಆಹಾರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರು ಸುದ್ದಿ­ಸಂಸ್ಥೆಗೆ ತಿಳಿಸಿದರು. ಸಂಬಂಧಪಟ್ಟ ಇಲಾಖೆ ಈ ಕುರಿತು ಆದೇಶ ಹೊರಡಿ­ಸುತ್ತದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.