ADVERTISEMENT

ಇಂದು ಸಂಸತ್‌ ಜಂಟಿ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 8 ಜೂನ್ 2014, 19:30 IST
Last Updated 8 ಜೂನ್ 2014, 19:30 IST

ನವದೆಹಲಿ: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಸಂಸತ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಭಾಷಣ ಮಾಡಲಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆ ಹೊಸ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರದ ಆದ್ಯತೆಗಳನ್ನು ರಾಷ್ಟ್ರಪತಿ ತಿಳಿಸಲಿದ್ದಾರೆ. ಹಿಂದಿನ ಯುಪಿಎ ಸರ್ಕಾರದ ವೈಫಲ್ಯ ಗಳನ್ನು ಸಹ ಅವರು ಪ್ರಸ್ತಾಪಿಸಲಿದ್ದಾರೆ.

ಈ ಭಾಷಣವನ್ನು ಸಿದ್ಧಪಡಿಸಲು ಹಿರಿಯ ಸಚಿವರಾದ ರಾಜನಾಥ್‌ ಸಿಂಗ್‌ ಮತ್ತು ಅರುಣ್‌ ಜೇಟ್ಲಿ ಅವ­ರಿಗೆ ಪ್ರಧಾನಿ ಜವಾಬ್ದಾರಿ ವಹಿಸಿ­ದ್ದಾರೆ. ಮಂಗಳವಾರ ಮತ್ತು ಬುಧ­ವಾರ ಉಭಯ ಸಭೆಗಳಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ನಿಲುವಳಿ ಮೇಲೆ ಚರ್ಚೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.