ADVERTISEMENT

ಇತಿಹಾಸತಜ್ಞ ತಪನ್‌ ನಿಧನ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2014, 19:30 IST
Last Updated 29 ನವೆಂಬರ್ 2014, 19:30 IST

ನವದೆಹಲಿ (ಐಎಎನ್‌ಎಸ್‌): ಖ್ಯಾತ ಇತಿಹಾಸ ತಜ್ಞ ತಪನ್‌ ರಾಯ್‌ ಚೌಧರಿ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಭಾರತ–ಆಂಗ್ಲ ಇತಿಹಾಸ,  ಭಾರತದ ಆರ್ಥಿಕ ಇತಿಹಾಸ ಹಾಗೂ ಬಂಗಾಳದ ಇತಿಹಾಸದ ಬಗ್ಗೆ ಆಳವಾದ ಜ್ಞಾನ ಹೊಂದಿದ್ದರು.

ಇತಿಹಾಸಕ್ಕೆ ಇವರ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ ಇವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿತ್ತು. ತಪನ್‌ ಅವರ ನಿಧನಕ್ಕೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.