ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರ ಆಣತಿ ಮೇರೆಗೆ ಗೃಹ ವ್ಯವಹಾರಗಳ ಸಚಿವಾಲಯ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿನ ಹಳೆಯ, ಅನಗತ್ಯ ಕಡತಗಳ ವಿಲೇವಾರಿ ಮಾಡಲಾಗುತ್ತಿದೆ.
‘ಈ ಎರಡು ಪ್ರಮುಖ ಇಲಾಖೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಅನುಕೂಲಕರ ವಾತಾವರಣ ನಿರ್ಮಿಸಿಕೊಡುವ ಉದ್ದೇಶದಿಂದ ಈ ಕೆಲಸ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಚೇರಿಯನ್ನು ಸ್ವಚ್ಛವಾಗಿ, ಅಚ್ಚುಕಟ್ಟಾಗಿ ಇಡುವಂತೆ ಈ ಎರಡೂ ಇಲಾಖೆಗಳ ಸಿಬ್ಬಂದಿಗೆ ತಾಕೀತು ಮಾಡಲಾಗಿದೆ. ಕೆಲಸ ಮಾಡುವ ಸ್ಥಳವನ್ನು ಅಚ್ಚುಕಟ್ಟಾಗಿ ಇಡುವಂತೆ ಕೇಂದ್ರ ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳಿಗೆ ಸಂಪುಟ ಕಾರ್ಯದರ್ಶಿ ಅಜಿತ್್ ಸೇಥ್ ಇತ್ತೀಚೆಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.