ಗಾಂಧಿನಗರ (ಪಿಟಿಐ): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಆಯ್ಕೆಯಾಗಿರುವುದರಿಂದ ಅಯೋಧ್ಯೆಯಲ್ಲಿ ಸಾಂವಿಧಾನಿಕ ಚೌಕಟ್ಟಿನೊಳಗೆ ರಾಮಮಂದಿರ ನಿರ್ಮಿಸಬೇಕು ಎಂದು ಗುಜರಾತ್ ವಿಧಾನಸಭಾ ಪ್ರತಿಪಕ್ಷ ನಾಯಕರಾದ ಶಂಕರಸಿಂಗ್ ವಘೇಲಾ ಸವಾಲು ಹಾಕಿದ್ದಾರೆ.
ವಘೇಲಾ ಅವರ ಈ ಹೇಳಿಕೆಯು ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
‘ಅಡ್ವಾಣಿ ಅವರು ರಥಯಾತ್ರೆ ನಡೆಸಿದಾಗ ಬಿಜೆಪಿ ಅತ್ಯಧಿಕ ಕ್ಷೇತ್ರಗಳನ್ನು ಗೆದ್ದಿತ್ತು. ಆದರೆ ಆಗ ಅಧಿಕಾರಕ್ಕೆ ಬಂದುದು ಎನ್ಡಿಎ ಮೈತ್ರಿಕೂಟವಾದ್ದರಿಂದ ಪ್ರಧಾನಿಯಾಗಿದ್ದ ವಾಜಪೇಯಿ ಅವರು ಹೊಂದಾಣಿಕೆ ಮಾಡಿಕೊಳ್ಳಬೇಕಾಗಿತ್ತು.
ಈಗ ಬಿಜೆಪಿ ಸ್ವಂತ ಬಲದಿಂದಲೇ ಬಹುಮತ ಪಡೆದಿದೆ. ಮಂದಿರ ನಿರ್ಮಾಣಕ್ಕೆ ಎನ್ಡಿಎ ಕೂಡ ಒಪ್ಪುವುದಾದರೆ ಒಳ್ಳೆಯದೇ. ಇಲ್ಲದಿದ್ದರೆ ಬಿಜೆಪಿಯು ಸಾಂವಿಧಾನಿಕ ನೀತಿನಿಯಮಗಳಡಿ ರಾಮಮಂದಿರ ನಿರ್ಮಿಸಬೇಕು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.