ಚೆನ್ನೈ (ಪಿಟಿಐ): ಈಶಾನ್ಯ ಮಾರುತವು ಚುರುಕುಗೊಂಡಿದ್ದು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾನುವಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರದಿಂದ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಮತ್ತು ಕೇರಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.
ರಾಯಲಸೀಮಾ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಹಾಗೂ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಕೇರಳದ ಕರಾವಳಿಯ ಕೆಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದೆ. ಆಂಧ್ರಪ್ರದೇಶದ ಮಾಚರ್ಲದಲ್ಲಿ 29 ಸೆಂ.ಮೀ, ಕರ್ನಾಟಕದ ಬೇವೂರಿನಲ್ಲಿ 13, ತೆಲಂಗಾಣದ ಜುನಾಸಾಗರದಲ್ಲಿ 11, ತಮಿಳುನಾಡಿನ ವಾಲ್ಪಾರೈನಲ್ಲಿ 10, ಕೇರಳದ ಕುದುನಲ್ಲಿ 8 ಸೆಂ.ಮೀ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.