ಶ್ರೀನಗರ: ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ಖುಡ್ ಬಳಿ ಕೇಂದ್ರೀಯ ಮೀಸಲು ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ಸೋಮವಾರ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ.
ಈ ಘಟನೆಯಲ್ಲಿ ಮೂವರು ನಾಗರಿಕರು ಗಾಯಗೊಂಡಿದ್ದಾರೆ.ಜಮ್ಮುಗೆ ತೆರಳುತ್ತಿದ್ದ ಬಸ್ಸೊಂದನ್ನು ಖುಡ್ ಬಳಿ ತಪಾಸಣೆಗಾಗಿ ನಿಲ್ಲಿಸಿದಾಗ ಅದರೊಳಗಿದ್ದ ಭಯೋತ್ಪಾದಕನೊಬ್ಬ ಮೀಸಲು ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಆಗ ಪ್ರತಿಯಾಗಿ ದಾಳಿ ನಡೆಸಿದಾಗ ಆತ ಸಾವಿಗೀಡಾಗಿದ್ದಾನೆ ಎಂದು ಪೊಲೀಸ್ ಮಹಾನಿರ್ದೇಶಕ ಕೆ. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಈ ಉಗ್ರನಿಂದ ಒಂದು ಎಕೆ–47ರೈಫಲ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಸಿಆರ್ಪಿಎಫ್ ಶಿಬಿರದ ಮೇಲೆ ದಾಳಿ ನಡೆಸಲು ಈತ ಸಂಚು ರೂಪಿಸಿದ್ದ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.