ADVERTISEMENT

ಉತ್ತರಾಖಂಡ: ಬಸ್ ಉರುಳಿ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2015, 14:10 IST
Last Updated 28 ಮಾರ್ಚ್ 2015, 14:10 IST

ಡೆಹ್ರಾಡೂನ್ (ಪಿಟಿಐ): ಖಾಸಗಿ ಬಸ್‌ ಉರುಳಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ರೋರಾ ಹಾಗೂ ಜ್ವಲ್ಪಾ ನಡುವಣ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಹಾಗೂ ಕ್ಲಿನರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಜೋಷಿ ತಿಳಿಸಿದ್ದಾರೆ.

ಅಲ್ಲದೇ, ದುರಂತದ ವೇಳೆ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂದಿರುವ ಅವರು, ಮೂರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

ADVERTISEMENT

ಗರ್ವಾಲ್ ಮೋಟಾರ್ ಮಾಲೀಕರ ಸಂಸ್ಥೆಯು ಈ ಬಸ್ ಅನ್ನು ಸರ್ವೀಸಿಂಗ್ ಮಾಡಿಸಲು ಕೋಟೆದ್ವಾರಕ್ಕೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.