ಲಖನೌ: ಉತ್ತರ ಪ್ರದೇಶದ ಔರೆಯಾ ಜಿಲ್ಲೆಯಲ್ಲಿ ಕೈಫಿಯತ್ ಎಕ್ಸ್ಪ್ರೆಸ್ ರೈಲಿನ ಒಂಬತ್ತು ಬೋಗಿಗಳು ಹಳಿ ತಪ್ಪಿ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಹಳಿ ದಾಟುತ್ತಿದ್ದ ಟಿಪ್ಪರ್ಗೆ ವೇಗವಾಗಿ ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ಇದರಿಂದ ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೈಲು ಅಜಮ್ಘರ್ನಿಂದ ದೆಹಲಿಗೆ ಹೊರಟಿತ್ತು. ಪಟ್ನಾ ಮತ್ತು ಅಚ್ಚಲ್ಡಾ ನಿಲ್ದಾಣಗಳ ನಡುವೆ ಬುಧವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.