ADVERTISEMENT

ಉತ್ತರ ಪ್ರದೇಶ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಪಿಟಿಐ
Published 12 ಆಗಸ್ಟ್ 2017, 19:30 IST
Last Updated 12 ಆಗಸ್ಟ್ 2017, 19:30 IST
ಉತ್ತರ ಪ್ರದೇಶ: ಸಾವಿನ ಸಂಖ್ಯೆ 60ಕ್ಕೆ ಏರಿಕೆ
ಉತ್ತರ ಪ್ರದೇಶ: ಸಾವಿನ ಸಂಖ್ಯೆ 60ಕ್ಕೆ ಏರಿಕೆ   

ಲಖನೌ: ಗೋರಖಪುರ ಬಿಆರ್‌ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ಸರಣಿ ಮುಂದುವರಿದಿದ್ದು, 48 ಗಂಟೆಗಳಲ್ಲಿ ಆಮ್ಲಜನಕದ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 60ಕ್ಕೆ ಏರಿದೆ. ಗುರುವಾರ ಮತ್ತು ಶುಕ್ರವಾರ 30ರಷ್ಟಿದ್ದ ಮಕ್ಕಳ ಸಾವಿನ ಸಂಖ್ಯೆ ಶನಿ
ವಾರ ಒಂದೇ ದಿನದಲ್ಲಿ ದುಪ್ಪಾಟ್ಟಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆಮ್ಲಜನಕ ಕೊರತೆಯಲ್ಲ!: ಮಕ್ಕಳ ಸಾವಿಗೆ ಆಮ್ಲಜನಕ ಕೊರತೆ ಕಾರಣವಲ್ಲ. ಬದಲಾಗಿ ಆಸ್ಪತ್ರೆಯ ಗಲೀಜು ಮತ್ತು ಕೊಳಕು ವಾತಾವರಣ ಕಾರಣ ಎಂದು ಉತ್ತರ ಪ್ರದೇಶ ಸರ್ಕಾರ ಸ್ಪಷ್ಟಪಡಿಸಿದೆ.

ಗುರುವಾರ ರಾತ್ರಿ 2 ತಾಸು ಆಮ್ಲಜನಕ ಕೊರತೆ ಎದುರಾಗಿದ್ದು ಸತ್ಯ. ಆದರೆ, ಸಾವಿಗೆ ಅದೊಂದೇ ಕಾರಣವಲ್ಲ ಎಂದು ಆರೋಗ್ಯ ಸಚಿವ ಸಿದ್ಧಾರ್ಥನಾಥ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ADVERTISEMENT

ವಿವಾದ ಸೃಷ್ಟಿಸಿದ ಸಚಿವ: ‘ಕಳೆದ ವರ್ಷ ಆಗಸ್ಟ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿನ ಸಂಖ್ಯೆಗೆ ಹೋಲಿಸಿದರೆ ಈ ಆಗಸ್ಟ್‌ನಲ್ಲಿ ಸಾವಿನ ಸಂಖ್ಯೆ ಅಂಥ ದೊಡ್ಡದೇನಲ್ಲ’ ಎಂದು ಸಿಂಗ್‌ ಹೇಳಿದ್ದು ವಿವಾದ ಸೃಷ್ಟಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.