ನವದೆಹಲಿ (ಪಿಟಿಐ): ದೆಹಲಿ ಸರ್ಕಾರ ಮತ್ತು ಲೆ. ಗವರ್ನರ್ ನಡುವಿನ ಜಗಳ ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ಪೂರಕವಾಗಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪು ದೆಹಲಿ ಸರ್ಕಾರದ ಬತ್ತಳಿಕೆಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.
ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಪೊಲೀಸರನ್ನು ಬಂಧಿಸಿ ವಿಚಾರಣೆ ನಡೆಸುವ ಅಧಿಕಾರವಿದೆ ಎಂದು ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರದ ಆರೋಪ ಹೊತ್ತು ಬಂಧಿತರಾಗಿರುವ ಹೆಡ್ ಕಾನ್ಸ್ಟೆಬಲ್ ಅನಿಲ್ ಕುಮಾರ್ ಅವರ ಜಾಮೀನು ಪ್ರಕರಣದಲ್ಲಿ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ. ಅನಿಲ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ ಎಸಿಬಿಗೆ ಪೊಲೀಸರನ್ನು ತನಿಖೆ ನಡೆಸುವ ಅಧಿಕಾರವಿದೆ ಎಂದು ಪ್ರತಿಪಾದಿಸಿತು.
ಕಳೆದ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಇಲಾಖೆ ಸುತ್ತೋಲೆ ಹೊರಡಿಸಿ ಪೊಲೀಸರನ್ನು ತನಿಖೆ ನಡೆಸುವ ಅಧಿಕಾರ ಎಸಿಬಿಗೆ ಇಲ್ಲ ಎಂದಿತ್ತು.
ಒಂದು ಚುನಾಯಿತ ಸರ್ಕಾರಕ್ಕೆ ಕಾನೂನು ರಚಿಸುವ ಅಧಿಕಾರವಿದೆ. ಆಗಾಗಿ ಸರ್ಕಾರದ ಅಧೀನದಲ್ಲಿ ಬರುವ ಎಲ್ಲಾ ಘಟಕಗಳು ದೆಹಲಿ ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.
ದೆಹಲಿ ಹೈಕೋರ್ಟ್ನ ಈ ತೀರ್ಪಿನಿಂದ ಕೇಜ್ರಿವಾಲ್ ಸರ್ಕಾರಕ್ಕೆ ಬಲ ಸಿಕ್ಕಂತಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.