ADVERTISEMENT

ಏರ್‌ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಶಿವಸೇನೆಯ ಸಂಸದ ರವೀಂದ್ರ

ಆಸನ ವಿಚಾರದ ಆರೋಪ

ಏಜೆನ್ಸೀಸ್
Published 6 ಏಪ್ರಿಲ್ 2017, 9:15 IST
Last Updated 6 ಏಪ್ರಿಲ್ 2017, 9:15 IST
ಏರ್‌ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಶಿವಸೇನೆಯ ಸಂಸದ ರವೀಂದ್ರ
ಏರ್‌ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಶಿವಸೇನೆಯ ಸಂಸದ ರವೀಂದ್ರ   

ಮುಂಬೈ: ಶಿವಸೇನೆಯ ಸಂಸದ ರವೀಂದ್ರ ಗಾಯಕ್‌ವಾಡ್‌ ಏರ್‌ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ವರದಿಯಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ಸಂಸ್ಥೆಯ ಡ್ಯೂಟಿ ಮ್ಯಾನೇಜರ್‌ಗೆ ಸಂಸದ ರವೀಂದ್ರ ಮನಬಂದಂತೆ ಚಪ್ಪಲಿಯಿಂದ ಹೊಡೆದಿದ್ದಾರೆ. 15–17ಬಾರಿ ಹೊಡೆದಿದ್ದಾರೆ ಎಂದು ವೈಮಾನಿಕ ಸಂಸ್ಥೆ ಮೂಲಗಳು ತಿಳಿಸಿವೆ.

ವಿಮಾನದಲ್ಲಿ ಆಸನ ವ್ಯವಸ್ಥೆ ಕುರಿತು ಅಸಮಾಧಾನಗೊಂಡಿದ್ದ ಸಂಸದ ರವೀಂದ್ರ ಅವರು ಏರ್‌ ಇಂಡಿಯಾ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.