ನವದೆಹಲಿ (ಪಿಟಿಐ): ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮತ್ತು 2ಜಿ ತರಂಗಾಂತರ ಹಂಚಿಕೆ ಹಗರಣ ಕುರಿತಂತೆ ನಿವೃತ್ತ ಮಹಾಲೇಖಪಾಲ (ಸಿಎಜಿ) ವಿನೋದ್ ರಾಯ್ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ‘ನಾನು ನನ್ನ ಕರ್ತವ್ಯ ನಿಭಾಯಿಸಿದ್ದೇನೆ’ ಎಂದು ಭಾನುವಾರ ಹೇಳಿದರು.
‘ಬೇರೆಯವರು ಬರೆದಿರುವ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲಾರೆ ಆದರೆ, ನನ್ನ ಕರ್ತವ್ಯಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿದ್ದೇನೆ’ ಎಂದರು.
ತಮ್ಮ ಪುತ್ರಿ ದಮನ್ ಸಿಂಗ್ ಬರೆದಿರುವ ‘ಸ್ಟ್ರಿಕ್ಟ್ಲಿ ಪರ್ಸನಲ್: ಮನಮೋಹನ್ ಮತ್ತು ಗುರುಶರಣ್’ ಪುಸ್ತಕ ಬಿಡುಗಡೆ ಸಮಾರಂಭದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತ ನಾಡಿದರು.
2ಜಿ ತರಂಗಾಂತರ ಹಂಚಿಕೆ ಮತ್ತು ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಗಳಿಗೆ ಆಗಿನ ಪ್ರಧಾನಿ ಸಿಂಗ್ ಅವರು ಕಾರಣ ಎಂದು ರಾಯ್ ಟೀಕಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.