ನವದೆಹಲಿ: ಮಂಗಳವಾರ ಬೆಳಗ್ಗೆ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದರು. ಆದರೆ ರಾವತ್ ಅವರು ಘೋಷಿಸುವುದಕ್ಕಿಂತ ಮುನ್ನವೇ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿದ್ದಾರೆ!
ಮುಖ್ಯ ಚುನಾವಣಾ ಆಯುಕ್ತರು ದಿನಾಂಕವನ್ನು ಘೋಷಿಸುವ ಮುನ್ನವೇ ಅಮಿತ್ ಮಾಳವೀಯ ಅವರಿಗೆ ಇದು ಹೇಗೆ ಗೊತ್ತಾಯಿತು ಎಂದು ನೆಟಿಜನ್ಗಳು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.