ನವದೆಹಲಿ: ಜಾರ್ಖಂಡ್ನ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹರೀಶ್ ಚಂದ್ರ ಗುಪ್ತಾ ಹಾಗೂ ಇತರ ಆರೋಪಿಗಳನ್ನು ದೋಷಿಗಳೆಂದು ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ವಿಶೇಷ ನ್ಯಾಯಾಧೀಶ ಭರತ್ ಪರಷಾರ್ ಪ್ರಕರಣದಲ್ಲಿನ ಆರೋಪಿಗಳು ಭ್ರಷ್ಟಾಚಾರ ಹಾಗೂ ಮೋಸ, ಪಿತೂರಿ ಕ್ರಿಮಿನಲ್ ಆಪಾದನೆಗಳಲ್ಲಿ ದೋಷಿಗಳೆಂದು ತೀರ್ಪು ನೀಡಿದರು. ಅಪರಾಧಿಗಳ ಶಿಕ್ಷೆ ಪ್ರಮಾಣ ಗುರುವಾರ ಪ್ರಕಟಗೊಳ್ಳಲಿದೆ.
ರಾಜ್ಹಾರಾದಲ್ಲಿ ಖಾಸಗಿ ಸಂಸ್ಥೆ ವಿನಿ ಐರನ್ ಹಾಗೂ ಸ್ಟೀಲ್ ಉದ್ಯೋಗ್ ಲಿ.ಗೆ ಅನಧಿಕೃತವಾಗಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಒಟ್ಟು ಒಂಬತ್ತು ಆರೋಪಿಗಳ ಪೈಕಿ ನಾಲ್ವರು ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹರೀಶ್ ಚಂದ್ರ ಗುಪ್ತಾ, ಆಗಿನ ಮುಖ್ಯ ಕಾರ್ಯದರ್ಶಿ ಎ.ಕೆ.ಬಸು, ಇತರರು ದೋಷಿಗಳಾಗಿದ್ದಾರೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ವಿಷಯದಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ 2015ರ ಏಪ್ರಿಲ್ನಲ್ಲಿ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.