ನವದೆಹಲಿ/ತಿರುವನಂತಪುರ (ಐಎಎನ್ಎಸ್): ಕಾಂಗ್ರೆಸ್ ಮುಖಂಡ ಶಶಿ ತರೂರ್ ಶನಿವಾರ ಕೋವಲಂ ಸಮುದ್ರ ದಂಡೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಕೈಚೀಲದಲ್ಲಿ ಕಸ ಸಂಗ್ರಹಿಸಿದರು. ಪ್ರಧಾನಿ ಮೋದಿ ಅವರ ಸ್ವಚ್ಛತಾ ಆಂದೋಲನವನ್ನು ಶ್ಲಾಘಿಸಿ ಪಕ್ಷದ ವಕ್ತಾರ ಸ್ಥಾನದಿಂದ ವಜಾಗೊಂಡಿದ್ದರೂ ತರೂರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ತರೂರ್ ಅವರ ಈ ಕಾರ್ಯದ ಬಗ್ಗೆ ಟ್ವಿಟರ್ನಲ್ಲಿ ಮೋದಿ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.