ADVERTISEMENT

ಕಾರ್ಗಿಲ್ ವಿಜಯ ದಿನ: ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2016, 6:45 IST
Last Updated 26 ಜುಲೈ 2016, 6:45 IST
ಕಾರ್ಗಿಲ್ ವಿಜಯ ದಿನ: ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ
ಕಾರ್ಗಿಲ್ ವಿಜಯ ದಿನ: ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ   

ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. 1999ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ವಿಜಯಿಯಾಗುವಂತೆ ಮಾಡಿದ ಎಲ್ಲ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಶತ್ರುಗಳಿಗೆ ನಮ್ಮ ಯೋಧರು ಕೊಟ್ಟ ದಿಟ್ಟ ಉತ್ತರವನ್ನು ನಾವೆಂದೂ ಮರೆಯಲಾರೆವು. ಆ ಯೋಧರ ಬದುಕು ನಮಗೆ ಪ್ರೇರಣೆಯಾಗಬೇಕಿದೆ ಎಂದು ಕಾರ್ಗಿಲ್ ಸ್ಮರಣೆಯಲ್ಲಿ ಮೋದಿ ಸರಣಿ ಟ್ಟೀಟ್‍ಗಳನ್ನು ಮಾಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT