ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಿರಿಯ ಮುಖಂಡ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಶುಕ್ರವಾರ ಪ್ರಕರಣ ದಾಖಲಿಸಿದೆ.
ಇತ್ತೀಚೆಗೆ ಸಿಬಿಐ ಕಾರ್ತಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಬಳಿಕ ಜಾರಿ ನಿರ್ದೇಶನಾಲಯ ಈ ಕ್ರಮಕೈಗೊಂಡಿದೆ.
ಕಾರ್ತಿ, ಇಂದ್ರಾಣಿ ಮತ್ತು ಪೀಟರ್ ಮುಖರ್ಜಿ, ಚೆಸ್ ಮ್ಯಾನೇಜ್ಮೆಂಟ್ ಸರ್ವಿಸಸ್ (ಕಾರ್ತಿ ಮಾಲೀಕತ್ವದ ಸಂಸ್ಥೆ), ಅಡ್ವಾಂಟೇಜ್ ಸ್ಟ್ರಾಟೆಜೀಸ್ ಕನ್ಸಲ್ಟಿಂಗ್ ಕಂಪೆನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐಎನ್ಎಕ್ಸ್ ಮಿಡಿಯಾ ವತಿಯಿಂದ ಅಕ್ರಮವಾಗಿ ಹಣ ಪಾವತಿಸಿದ ಬಗ್ಗೆ ಜಾರಿ ನಿರ್ದೇಶನಾಲಯ ಸಿಬಿಐಗೆ ಮಾಹಿತಿ ನೀಡಿತ್ತು.
ಈ ಮಾಹಿತಿ ಆಧರಿಸಿ ಸಿಬಿಐ ಎಫ್ಐಆರ್ ದಾಖಲಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.