ನವಹೆದಲಿ: ಕರ್ನಾಟಕ ಮತ್ತು ತಮಿಳುನಾಡುಗಳ ನಡುವಿನ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಕೇಂದ್ರ ಸರ್ಕಾ ರದ ಮಧ್ಯಸ್ಥಿಕೆಯಲ್ಲಿ ಸಭೆ ಆರಂಭವಾಗಿದೆ. ಸಭೆಯ ನೇತತ್ವವನ್ನು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ವಹಿಸಿದ್ದಾರೆ.
ರಾಜ್ಯದ ಪರ ಸಿದ್ದರಾಮಯ್ಯ, ಸಚಿವ ಎಂ.ಬಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯ ದರ್ಶಿ ಅರವಿಂದ ಜಾಧವ್, ಜಲಸಂಪ ನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ ಸಿಂಗ್ ಭಾಗವಹಿಸಿದ್ದಾರೆ.
ತಮಿಳುನಾಡು ಪರವಾಗಿ ಲೋಕೋಪಯೋಗಿ ಸಚಿವ ಈಡಪ್ಪಾಡಿ ಪಳನಿಸ್ವಾಮಿ, ಮುಖ್ಯ ಕಾರ್ಯ ದರ್ಶಿ ರಾಮಮೋಹನ ರಾವ್ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.