ನವದೆಹಲಿ: ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ತಾತ್ವಿಕ ಒಪ್ಪಿಗೆ ದೊರೆತ ನಂತರವೂ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯ, ಪಕ್ಕದ ಮಲೆಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಅಭಯಾರಣ್ಯವನ್ನಾಗಿ ಘೋಷಿಸಿ ಅಧಿಸೂಚನೆ ಹೊರಡಿಸಲು ಕರ್ನಾಟಕ ಸರ್ಕಾರ ನಿರಾಸಕ್ತಿ ತೋರುತ್ತಿದೆ.
ಸುಮಾರು 20ಕ್ಕೂ ಹೆಚ್ಚು ಹುಲಿಗಳಿರುವ 2 ಸಾವಿರ ಚದರ ಕಿ.ಮೀ ವ್ಯಾಪ್ತಿಯಲ್ಲಿನ ಈ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಅಭಯಾರಣ್ಯ ಎಂದು ಘೋಷಿಸಲು ಪ್ರಾಧಿಕಾರದ ಸದಸ್ಯ ಉಲ್ಲಾಸ್ ಕಾರಂತ ಪ್ರಸ್ತಾಪ ಸಲ್ಲಿಸಿದ್ದರು.
ಸ್ಥಳೀಯ ರಾಜಕಾರಣದಿಂದ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಲು ಹಿಂದೇಟು ಹಾಕುತ್ತಿದೆ ಎಂದು ಮಂಗಳವಾರ ನಡೆದ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಯೊಬ್ಬರು ಹೇಳಿದರು.
ಕಾವೇರಿ ಮತ್ತು ಮಲೆಮಹದೇಶ್ವರ ಬೆಟ್ಟ ಅಭಯಾರಣ್ಯದ ಬಳಿಯ ಬಿಳಿಗಿರಿ ರಂಗನಾಥಸ್ವಾಮಿ ಟೆಂಪಲ್ (ಬಿಆರ್ಟಿ) ವನ್ಯಜೀವಿ ಅಭಯಾರಣ್ಯವನ್ನು 2010 ರಲ್ಲಿ ಹುಲಿ ಅಭಯಾರಣ್ಯ ಎಂದು ಘೋಷಿಸಲಾಗಿತ್ತು.
ಕುದುರೆಮುಖ ರಾಷ್ಟ್ರೀಯ ವನ್ಯಧಾಮವನ್ನು ಹುಲಿ ಅಭಯಾರಣ್ಯ ಎಂದು ಘೋಷಿಸಲು ಕೇಂದ್ರದ ಅನುಮತಿ ದೊರೆತಿದ್ದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸುವುದು ಬಾಕಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.